Agriculture Loan: ಬಜೆಟಿನಲ್ಲಿ ರೈತರಿಗೆ ₹5 ಲಕ್ಷ ಬಡ್ಡಿ ರಹಿತ ಸಾಲ

ಮುಧೋಳ: ರಾಜ್ಯ ಬಜೆಟ್‌ನಲ್ಲಿ ಕೃಷಿಕರಿಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬಂಪರ್ ಕೊಡುಗೆಗಳನ್ನು ನೀಡಿದ್ಧಾರೆ. ಇದೇ ವರ್ಷದಿಂದ ರೈತರಿಗೆ ನೀಡುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿಯನ್ನು ₹3 ಲಕ್ಷಗಳಿಂದ ₹5 ಲಕ್ಷಗಳಿಗೆ ಹೆಚ್ಚಿಸಲಾಗಿದೆ.

ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ ₹25,000 ಕೋಟಿಗಳಷ್ಟು ಸಾಲ ವಿತರಿಸಲಾಗುವುದು ಎಂದು ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ ಮಾಡಿದರು. 

ಕೃಷಿ ವಲಯದ ಪ್ರಮುಖಾಂಶಗಳು

  • ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ ₹10 ಸಾವಿರಗಳ ಹೆಚ್ಚುವರಿ ಸಹಾಯ ಧನ ನೀಡಲಾಗುವುದು.
  • ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ ₹962 ಕೋಟಿ ವೆಚ್ಚ ಮಾಡಲಾಗಿದೆ.
  • ನೀರಾವರಿ ಪಂಪ್‌ಸೆಟ್‌ಗಳಿಗೆ ₹52,590 ಕೋಟಿ ವಿದ್ಯುತ್‌ ಸಹಾಯ ಧನ ನೀಡಲಾಗಿದೆ.
  • ಫಸಲ್ ಬಿಮಾ ಯೋಜನೆಯಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ ₹4,900 ಕೋಟಿ ಪ್ರೀಮಿಯಂ ಪಾವತಿಸಲಾಗಿದೆ.
  • ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ, ರಾಗಿ, ಜೋಳ, ಹೆಸರು ಕಾಳು ಮತ್ತು ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗಾಗಿ ₹6,650 ಕೋಟಿ ಒದಗಿಸಲಾಗಿದೆ.
  • ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳಿಗೆ ₹180 ಕೋಟಿ ವೆಚ್ಚದಲ್ಲಿ ಜೀವನ್‌ ಜ್ಯೋತಿ ವಿಮಾ ಯೋಜನೆಯಡಿ ಭದ್ರತೆ ನೀಡಲಾಗುವುದು.
  • ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ ₹400 ಕೋಟಿ ಅನುದಾನ
  • ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು ₹2,037 ಕೋಟಿ
  • ಬೆಳೆಗಳ ಸಂಸ್ಕರಣೆ, ಶೇಖರಣೆಗಾಗಿ 10.45 ಲಕ್ಷ ಫಲಾನುಭವಿಗಳಿಗೆ ₹175 ಕೋಟಿ ನೆರವು ನೀಡಲಾಗಿದೆ.
  • ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ ₹5,245 ಕೋಟಿ ವೆಚ್ಚ ಮಾಡಲಾಗಿದೆ.
  • ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ 10.32 ಲಕ್ಷ ವಿದ್ಯಾರ್ಥಿಗಳಿಗೆ ₹125 ಕೋಟಿ ನೀಡಲಾಗಿದೆ.
  • ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ ₹2,900 ಕೋಟಿಗೆ ಮಾರುಕಟ್ಟೆ ನೆರವು ನೀಡಲಾಗಿದೆ.
ನವೀನ ಹಳೆಯದು